ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಮೇಘಾಲಯ ರಾಜ್ಯಪಾಲರಿಂದ ‘ನಮ್ಮ ಹೆಮ್ಮೆಯ ಸಾಧಕರು’ ಪ್ರಶಸ್ತಿ ಪ್ರಧಾನ.

ಜನಶಕ್ತಿ ವಿಶ್ವಸ್ಥ ಮಂಡಳಿ ಲೋಕ ಧ್ವನಿ ‘ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ’ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಆಯ್ಕೆಯಾಗಿದ್ದು, ಇದೇ ಜುಲೈ ೧೧ ರಂದು ಶನಿವಾರ ಶಿಲ್ಲಾಂಗ್‌ನ ಲೋಕಭವನದಲ್ಲಿ ಹಮ್ಮಿಕೊಂಡಿದ್ದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರು ಕುಲಪತಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರಿಗೆ ಪ್ರಶಸ್ತಿ ಒಲಿದಿರುವುದಕ್ಕೆ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ, ಉಪಕುಲಸಚಿವರು, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು, ವಿವಿಧ ವಿಭಾಗಗಳ ನಿಕಾಯ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.