NEW

Conduction of PG I & III Semester MSW Practical(Field work and Social work Camp Viva-Voce) Examinations 2025-26. ದಿನಾಂಕ. 03.03.2026ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯಕ್ಕೆ ಸ್ಥಳೀಯ ರಜೆಯನ್ನು ಘೋಷಿಸುವ ಕುರಿತು. 2024-25 ನೇ ಸಾಲಿನ ಬಿ.ಎಡ್ ಸ್ನಾತಕ(UG) ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ನೇರ ಪ್ರಸಾರ ಲಿಂಕ್‌ಗಳು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) Revised NEP/NEP (BA, B.Sc,B.Com,BCA,BBA ಮತ್ತು BSW) ಪದವಿಗಳಿಗೆ II, IV ಹಾಗೂ VI ನೇ ಸೆಮಿಸ್ಟರ್ ನಲ್ಲಿ ವಿದ್ಯಾರ್ಥಿಗಳ Course Registration ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ : 7 ದಿನಗಳ ರಾಷ್ಟೀಯ ಸೇವಾ ಯೋಜನೆ ರಾಷ್ಟೀಯ ಭಾವೈಕ್ಯತಾ ಶಿಬಿರ – 2026

ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತರಾಗಿ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಆದಿಕವಿ ಶ್ರೀ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅಭಿಪ್ರಾಯಪಟ್ಟರು.
ರಾಷ್ಟೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ, ಪ್ರಾದೇಶಿಕ ನಿರ್ದೇಶನಾಲಯ, ಏನ್.ಎಸ.ಎಸ. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಭಾರತ ಸರ್ಕಾರ ಸಹಯೋಗದೊಂದಿಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ರಾಷ್ಟೀಯ ಸೇವಾ ಯೋಜನೆ ಅಡಿಯಲ್ಲಿ ವಿವಿಯ ಸಭಾಂಗಣದಲ್ಲಿ ದಿನಾಂಕ. 24 ರಂದು ನಡೆದ 7 ದಿನಗಳ ರಾಷ್ಟೀಯ ಭಾವೈಕ್ಯತಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವರಾದ ಡಾ. ಎ.ಚನ್ನಪ್ಪ ಅವರು ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿ ನಡೆಯುವ ರಾಷ್ಟೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ, ವ್ಯಕ್ತಿಗತವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ರಾಷ್ಟ್ರಿಯ ಸೇವಾ ಯೋಜನೆಯ ಉದ್ದೇಶಗಳನ್ನು ಜೀವನದ ಉದ್ದಕ್ಕೂ ಪಾಲಿಸಬೇಕು. ಶಿಬಿರದಲ್ಲಿ ಕಲಿತುಕೊಂಡ ವಿಚಾರಗಳನ್ನು, ಸಂಸ್ಕಾರ ಹೆಚ್ಚಿಸುವ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಏಳು ದಿನಗಳ ಈ ಶಿಬಿರ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಆತ್ಮ ಸ್ಥೈರ್ಯ ಹಾಗೂ ಉತ್ತಮ ಪ್ರಜೆಗಳಾಗಿ ಬದುಕಲು ಕಲಿಸಿಕೊಡುತ್ತದೆ ಎಂದರು. ಈ ಸಂದರ್ಭದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು ಡಾ.ಸುಯಮಿಂದ್ರ ಕುಲಕರ್ಣಿ, ಉಪಕುಲಪತಿಗಳು ಡಾ.ಕೆ.ವೆಂಕಟೇಶ್, ಡೀನರಾದ ಪ್ರೊ. ಪಾರ್ವತಿ ಸಿ.ಎಸ., ಡಾ.ಲತಾ.ಎಂ.ಎಸ., ಏನ್.ಎಸ.ಎಸ ಸಂಯೋಜನಾ ಅಧಿಕಾರಿ ಡಾ.ಜಿ.ಎಸ.ಬಿರಾದಾರ ಮತ್ತು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದ್ಯಸರಾದ ಡಾ.ಮೀನಾಕ್ಷಿ ಖಂಡಿಮಠ, ಡಿ.ಆರ್.ಚಿನ್ನ, ಜೀಶಾನ್ ಅಖಿಲ ಸಿದ್ದಿಖಿ, ಶಿವಣ್ಣ, ಶ್ರೇಯಾಂಕ್ ಎಚ್.ವಿ ರವರು ಪಾಲ್ಗೊಂಡಿದ್ದರು.