ದಿ. ೨೧ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಶರಣ ಪರಂಪರೆಯ ಅಂಬಿಗರ ಚೌಡಯ್ಯರ ಕಾಯಕತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಇಂತಹ ಮಹನೀಯರ ಜಯಂತಿ ಆಚರಣೆ ಶ್ಲಾಘನೀಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಗ್ರಂಥಪಾಲಕ ಡಾ.ಜಿ.ಎಸ್.ಬಿರಾದಾರ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಸ್ವಾಗತಿಸಿ ವಂದಿಸಿದರು.
