NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ವಾಲ್ಮೀಕಿ ವಿವಿಯಲ್ಲಿಅಂಬಿಗರ ಚೌಡಯ್ಯ ಜಯಂತಿ ಆಚರಣೆ: ಅಂಬಿಗರ ಚೌಡಯ್ಯರ ಕಾಯಕ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳೋಣ : ಪ್ರೊ.ಶಿವಾನಂದ ಕೆಳಗಿನಮನಿ

ದಿ. ೨೧ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್‌ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಶರಣ ಪರಂಪರೆಯ ಅಂಬಿಗರ ಚೌಡಯ್ಯರ ಕಾಯಕತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಇಂತಹ ಮಹನೀಯರ ಜಯಂತಿ ಆಚರಣೆ ಶ್ಲಾಘನೀಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಗ್ರಂಥಪಾಲಕ ಡಾ.ಜಿ.ಎಸ್.ಬಿರಾದಾರ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಸ್ವಾಗತಿಸಿ ವಂದಿಸಿದರು.