NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ವಾಲ್ಮೀಕಿ ವಿವಿಯ ತೃತೀಯ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭ

ದೈಹಿಕ ಕ್ಷಮತೆ ಮತ್ತು ಕ್ರೀಯಾಶೀಲ ಬದುಕಿಗೆ ಕ್ರೀಡೆ ಮುಖ್ಯ : ಡಾ.ಜ್ಯೋತಿ ಧಮ್ಮ ಪ್ರಕಾಶ್

ದಿನಾಂಕ: ೦೫/೧೨/೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ೨೦೨೫-೨೬ ನೇ ಸಾಲೀನ ತೃತೀಯ ಅಂತರ ಮಹಾವಿದ್ಯಾಲಯಗಳ (ಪುರುಷ ಮತ್ತು ಮಹಿಳಾ) ಅಥ್ಲೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ವಿ.ಆರ್.ಇ.ಟಿ. ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ಧಮ್ಮ ಪ್ರಕಾಶ್, ವಿ.ಆರ್.ಇ.ಟಿ ಸಂಸ್ಥೆಯ ಅಧ್ಯಕ್ಷರಾದ ಮಹಾದೇವಿ ಪಾಸೋಡಿ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ನಿರ್ದೇಶಕರಾದ ಡಾ.ಲತಾ.ಎಂ.ಎಸ್., ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ.ನಾಗರತ್ನ ಎಮ್.ನಾಯ್ಕ, ಕಾನೂನು ಸಲಹೆಗಾರರು ಮತ್ತು ವಕೀಲರಾದ ವಿಜಯಲಕ್ಷ್ಮಿ ಪಾಸೋಡಿ, ಕೃಷಿ ವಿವಿಯ ದೈಹಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕರು ಮತ್ತು ನಿರ್ದೇಶಕರಾದ ಡಾ.ರಾಜಣ್ಣ ಉಪಸ್ಥಿತರಿದ್ದರು.
ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಮಗ್ರ ವೀರಾಗ್ರಹಿಣಿ ಪ್ರಶಸ್ತಿಯನ್ನು ಪುರುಷ ವಿಭಾಗದಲ್ಲಿ ಮಾನ್ವಿಯ ಜಿಎಫ್‌ಜಿಸಿ ಪಡೆದರೆ, ಮಹಿಳಾ ವಿಭಾಗದಲ್ಲಿ ಹಾಗೂ ಮಹಿಳಾ ಮತ್ತು ಪುರುಷ ವಿಭಾಗದಲ್ಲಿ ಒಟ್ಟುಗೂಡಿ ಸಮಗ್ರ ವೀರಾಗ್ರಹಿಣಿ ಪ್ರಶಸ್ತಿಯನ್ನು ರಾಯಚೂರಿನ ವಿಆರ್‌ಇಟಿ ಕಾಲೇಜು ಪಡೆಯಿತು. ಈ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪಾರಿತೋಷಕ ಮತ್ತು ಪ್ರಮಾಣ ಪತ್ರಗಳನ್ನು ನೀಡಲಾಯಿತು.