NEW

2025-26 ನೇ ಸಾಲಿನ ಪಿಚ್.ಡಿ ಕೋರ್ಸ್ ವರ್ಕ್ ನ(Ph.D Course Work) ಪರೀಕ್ಷಾ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ ಪ್ರವೇಶಾತಿಯ ಖಾಲಿ ಸೀಟುಗಳ ಕೌನ್ಸಿಲಿಂಗ್ ದಿನಾಂಕ ಬದಲಿಸಲಾಗಿರುವ ಕುರಿತು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಎಲ್ಲ ಅಧೀನ ಹಾಗೂ ಸಂಲಗ್ನ ಮಹಾವಿದ್ಯಾಲಯಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸುವ ಕುರಿತು. Fee Structure Prescribed for Various PG Courses (First Year) offered in the Private Affiliated Colleges for the Academic Year 2026-27 Fee Structure Prescribed for Various PG Courses (First Year) offered in the Government Colleges for the Academic Year 2026-27 Fee Structure Prescribed for Various PG Courses (First Year) offered in the University Main Campus for the Academic Year 2026-27 CYBEROMEGA IT LLP ಸಂಸ್ಥೆಯ ವತಿಯಿಂದ ಸ್ನಾತಕ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ಯೆಗಾರಿಕೆ ಹಾಗು ಶೈಕ್ಷಣಿಕ ಕಾರ್ಯಚಟುವಟಿಕೆಗಳ ತರಬೇತಿ ಕುರಿತು

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಧಾರ್ಮಿಕ ಸಾಮರಸ್ಯ ಬಿಂಬಿಸಿದವರು ಶಿವಾಜಿ – ಪ್ರೊ.ಶಿವಾನಂದ ಕೆಳಗಿನಮನಿ

ಶಿವಾಜಿ ಭಾರತದ ಅಪ್ರತಿಮ ವೀರ ಸೇನಾನಿ, ಹಿಂದೂ ಧರ್ಮವನ್ನು ರಕ್ಷಣೆ ಮಾಡಿದ ಮಹಾನ್ ಹೋರಾಟಗಾರ, ಹಿಂದೂ ಧರ್ಮಕ್ಕೆ ಛತ್ರಪತಿ ಶಿವಾಜಿಯವರ ಕೊಡುಗೆ ಅಪಾರವಾಗಿದ್ದು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಹೇಳಿದರು.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್‌ನಲ್ಲಿ ಛತ್ರಪತಿ ಶಿವಾಜಿಯವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಿ ಮಾತನಾಡಿದ ಅವರು, ಮಾನವತಾವಾದಿಯಾಗಿದ್ದ ಶಿವಾಜಿ ಮಹಿಳೆಯರಿಗೆ ವಿಶೇಷ ಗೌರವ ನೀಡುತ್ತಿದ್ದರು. ವಿಶಿಷ್ಠ ಯುದ್ಧ ತಂತ್ರ ನೌಕಾಪಡೆಯ ನಿರ್ಮಾಣ, ಕೋಟೆಗಳ ನಿರ್ವಹಣೆ, ಮರಾಠಿ ಭಾಷೆಯ ಪ್ರೋತ್ಸಾಹ ಮತ್ತು ಸುಸಜ್ಜಿತ ಆಡಳಿತಾತ್ಮಕ ವ್ಯವಸ್ಥೆಗಳಂತಹ ಆವಿಷ್ಕಾರಗಳ ಮೂಲಕ ಬಲಿಷ್ಠ ಹಿಂದೂ ಸ್ವರಾಜ್ಯವನ್ನು ಸ್ಥಾಪಿಸಿದರು. ಶಿವಾಜಿ ಮಹಾರಾಜರು ಮತ್ತು ಕರ್ನಾಟಕದ ಬಾಂಧವ್ಯ ಐತಿಹಾಸಿಕವಾಗಿ ಕೌಟುಂಬಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಆಳವಾಗಿದೆ. ಕನ್ನಡ ಭಾಗದ ಜನರಿಂದ ಬೆಂಬಲ ಮತ್ತು ದಕ್ಷಿಣ ದಂಡೆಯಾತ್ರೆಯ ಮೂಲಕ ಕನ್ನಡ ನಾಡು ನುಡಿಗಳೊಂದಿಗೆ ಶಿವಾಜಿ ವಿಶಿಷ್ಠ ಬಾಂಧವ್ಯ ಹೊಂದಿದ್ದರು. ತಮ್ಮ ಆಡಳಿತಾವಧಿಯಲ್ಲಿ ಮರಾಠಿ ಭಾಷೆಯನ್ನು ಬರೆಯಲು ವ್ಯಾಪಕವಾಗಿ ಬಳಸುತ್ತಿದ್ದ ಭಾಷಾ ಲಿಪಿಯು ಮೋಡಿ ಲಿಪಿಯಾಗಿತ್ತು. ಶಿವಾಜಿ ಹೊಂದಿದ ಮಾನವೀಯತಾ ಮೌಲ್ಯಗಳು, ಸಾಂಸ್ಕೃತಿಕ ಹಿರಿಮೆಗಳು, ಹಿಂದೂ ಧರ್ಮದ ರಕ್ಷಣೆಯ ನೈತಿಕತೆಗಳು ಮತ್ತು ನಿಲುವು ಕೂಡ ಆದರ್ಶಪ್ರಾಯಾವಾಗಿವೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಡೀನರಾದ ಡಾ.ಲತಾ ಎಂ.ಎಸ್., ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಸ್ವಾಗತಿಸಿ ವಂದಿಸಿದರು.