
ದಿ. ೧೪ ಜನವರಿ ೨೦೨೬ : ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿಂದು ಶಿವಯೋಗಿ ಸಿದ್ಧರಾಮ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸೊನ್ನಲಿಗೆ ಶಿವಯೋಗಿ ಸಿದ್ಧರಾಮ ಇವರು ೧೨ ನೇಯ ಶತಮಾನದ ಶರಣರಲ್ಲಿ ಒಬ್ಬರಾದ ಇವರು ಶ್ರೇಷ್ಠ ವಚನಕಾರರು ಇವರ ಅಂಕಿತನಾಮ ಕಪಿಲಸಿದ್ದ ಮಲ್ಲಿಕಾರ್ಜುನ. ಶಿವಯೋಗಿ ಸಿದ್ಧರಾಮ ಅವರ ಕರ್ತವ್ಯ ನಿಷ್ಠೆ ಮತ್ತು ವೈಚಾರಿಕತೆ ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗುವುದು ಎಂದು ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್. ಅವರು ಹೇಳಿದರು. ಉಪಕುಲಸವ ಡಾ.ಕೆ.ವೆಂಕಟೇಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಡಾ.ಸುಯಮೀಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್, ಡಾ.ಲತಾ.ಎಂ.ಎಸ್., ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.